Published on: November 28, 2022

ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್:

ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್:

ಸುದ್ದಿಯಲ್ಲಿ ಏಕಿದೆ?

ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್‌ನಡಿ ಆರೋಗ್ಯ ವೃತ್ತಿಪರರು ಮತ್ತು ಆರೋಗ್ಯ ಸೌಲಭ್ಯ ನೋಂದಣಿಯಲ್ಲಿ ಇಡೀ ದೇಶದಲ್ಲಿ ಕರ್ನಾಟಕ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ.

ಮುಖ್ಯಾಂಶಗಳು

  • ಆರೋಗ್ಯ ಆರೈಕೆ ವೃತ್ತಿಪರರ ನೋಂದಣಿ (ಎಚ್.ಪಿ.ಆರ್) ವಲಯದಲ್ಲಿ 28,643 ವೈದ್ಯರು ಮತ್ತು ದಾದಿಯರು ನೋಂದಣಿಯಾಗಿದ್ದು, ರಾಜ್ಯ ಮೊದಲ ಸ್ಥಾನದಲ್ಲಿದೆ.
  • ಆರೋಗ್ಯ ಸೌಲಭ್ಯ ನೋಂದಣಿಯಡಿ(ಎಚ್.ಎಫ್.ಆರ್) ಕರ್ನಾಟಕ 2ನೇ ಸ್ಥಾನದಲ್ಲಿದ್ದು, 27,244 ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
  • ದೇಶದಲ್ಲಿ 1.35 ಕೋಟಿ ಜನ ಆಯುಷ್ಮಾನ್ ಭಾರತ್ ಆರೋಗ್ಯ ಖಾತೆ ಹೊಂದಿದ್ದು, ಈ ವಲಯದಲ್ಲಿ ರಾಜ್ಯ 7ನೇ ಸ್ಥಾನದಲ್ಲಿದೆ.
  • ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್‌ನಡಿ ಸ್ಕ್ಯಾನ್ ಮತ್ತು ಶೇರ್ ವೈಶಿಷ್ಟ್ಯ ಬಳಸಿಕೊಂಡು ಹೊರರೋಗಿ ವಿಭಾಗಗಳಲ್ಲಿ ಬ್ಲಾಕ್‌ನಲ್ಲಿ ಫಾಸ್ಟ್ ಟ್ರ್ಯಾಕ್ ಕೌಂಟರ್‌ಗಳನ್ನು ಹೊಂದಿಸುವ ವಲಯದಲ್ಲೂ ರಾಜ್ಯ ಗಮನಾರ್ಹ ಸಾಧನೆ ಮಾಡಿದೆ.

ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ (ಎಬಿಡಿಎಂ)

  • ಪ್ರಾರಂಭ: 15th ಆಗಸ್ಟ್2020
  • ಎಲ್ಲೆಲ್ಲಿ ?ಆರು ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್ ಮತ್ತು ನಿಕೋಬಾರ್, ಚಂಡೀಗಢ, ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು, ಲಡಾಖ್, ಲಕ್ಷದ್ವೀಪ ಮತ್ತು ಪುದುಚೇರಿನಲ್ಲಿ ಪ್ರಾಂಭಿಸಲಾಯಿತು.
  • ಅನುಷ್ಠಾನ :ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್‌ಎಚ್‌ಎ)
  • ಈ ಯೋಜನೆಯಡಿ ನಾಗರಿಕರು ತಮ್ಮದೇ ಅದ ಪ್ರತ್ಯೇಕ ಡಿಜಿಟಲ್‌ ಆರೋಗ್ಯ ಖಾತೆ ತೆರೆಯಬಹುದಾಗಿದೆ. ಇರುವ ಡಿಜಿಟಲ್‌ ಆರೋಗ್ಯ ದಾಖಲೆಗಳನ್ನು ಈ ಖಾತೆಗೆ ಲಿಂಕ್‌ ಮಾಡಬಹುದಾಗಿದ್ದು, ಪ್ರತಿ ವ್ಯಕ್ತಿಯ ಸಂಪೂರ್ಣ ಆರೋಗ್ಯ ಕೈಪಿಡಿ ಸಿದ್ಧಗೊಳ್ಳಲಿದೆ.
  • ಚಿಕಿತ್ಸೆ ಮತ್ತು ಔಷಧೋಪಚಾರ ಎಲ್ಲದ್ದಕ್ಕೂ ವೈದ್ಯರನ್ನು ಖುದ್ದು ಕಾಣುವ ಅನಿವಾರ್ಯತೆ ಕಡಿಮೆ ಮಾಡುವ ಉದ್ದೇಶದಿಂದ ಈ ಡಿಜಿಟಲ್‌ ವ್ಯವಸ್ಥೆ ಸೃಷ್ಟಿಸಲಾಗಿದೆ.

ಉದ್ದೇಶ

  • ದೇಶದ ಸಮಗ್ರ ಡಿಜಿಟಲ್ ಆರೋಗ್ಯ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿದೆ. ಇದು ಡಿಜಿಟಲ್ ಮಾರ್ಗಗಳ ಮೂಲಕ ಆರೋಗ್ಯ ಪರಿಸರ ವ್ಯವಸ್ಥೆಯ ವಿವಿಧ ಪಾಲುದಾರರ ನಡುವೆ ಇರುವ ಅಂತರ ತಗ್ಗಿಸುತ್ತದೆ.

ಪ್ರಯೋಜನ:

  • ಈ ಬೆಳವಣಿಗೆಯಿಂದಾಗಿ ಭೌತಿಕವಾಗಿ ಯಾವುದೇ ದಾಖಲೆಗಳನ್ನು ಸಾಗಿಸುವ ಅಗತ್ಯ ಕಂಡು ಬರುವುದಿಲ್ಲ. ಸಮ್ಮತಿ ಮೇರೆಗೆ ಸುದೀರ್ಘ ವೈಯಕ್ತಿಕ ಆರೋಗ್ಯ ದಾಖಲೆಗಳನ್ನು ಹೊಂದಬಹುದಾಗಿದೆ.
  • ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ(ಎನ್‌ಎಚ್‌ಎ) ಸಹಕಾರದೊಂದಿಗೆ ಇ-ಆಸ್ಪತ್ರೆಯಲ್ಲಿ ಸ್ಕ್ಯಾನ್ ಮತ್ತು ಶೇರ್ ಸೌಲಭ್ಯದ ಮೂಲಕ ಹೊರರೋಗಿ ವಿಭಾಗದ ವೇಗದ ನೋಂದಣಿ ಪ್ರಾರಂಭಿಸಲಾಗಿದೆ. ಇದರಿಂದ ಒಪಿಡಿ ನೋಂದಣಿಗಾಗಿ ಸರತಿಯಲ್ಲಿ ಕಾಯುವ ಸಮಯ ಕಡಿಮೆಯಾಗಿದೆ.
  • ಆರೋಗ್ಯ ದಾಖಲೆಗಳ ಸಂಪರ್ಕ ಸಹ ಸುಗಮವಾಗಿದೆ. ಆಧಾರ್ ಮೂಲಕ ನಿಖರವಾದ ದತ್ತಾಂಶವನ್ನು ಇ-ಹಾಸ್ಪಿಟಲ್ ಪೋರ್ಟಲ್‌ನಲ್ಲಿ ನಮೂದಿಸುವುದರಿಂದ ನಕಲು ಮಾಡುವುದನ್ನು ತಡೆಯಬಹುದು ಎಂದು ವಿವರಿಸಿದ್ದಾರೆ.
  • ಈ ವ್ಯವಸ್ಥೆಯನ್ನು ಸಿ.ವಿ.ರಾಮನ್ ನಗರದ ಜನರಲ್ ಆಸ್ಪತ್ರೆಯಲ್ಲಿ ಇದೇ ವರ್ಷದ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದ್ದು, ಇದೀಗ ರಾಜ್ಯದ 15 ಆಸ್ಪತ್ರೆಗಳಲ್ಲಿ ಈ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ.