Published on: October 10, 2022

‘ಕೋಟಿ ಕಂಠ’ದಲ್ಲಿ ಗಾಯನ

‘ಕೋಟಿ ಕಂಠ’ದಲ್ಲಿ ಗಾಯನ

ಸುದ್ದಿಯಲ್ಲಿ ಏಕಿದೆ?

‘2021ರಲ್ಲಿ ‘ಮಾತಾಡ್ ಮಾತಾಡ್ ಕನ್ನಡ’ ಘೋಷ ವಾಕ್ಯದೊಂದಿಗೆ  ಏರ್ಪಡಿಸಿದ್ದ ‘ಲಕ್ಷ ಕಂಠ’ ಗಾಯನ ಯಶಸ್ವಿಯಾಗಿದ್ದ ಹಿನ್ನೆಲೆಯಲ್ಲಿ ಅಕ್ಟೋಬರ್ 2022ರಲ್ಲಿ ರಾಜ್ಯದಾದ್ಯಂ ತ ಕನ್ನಡದ ಕವಿಗಳ ಜನಪ್ರಿಯ ಗೀತೆಗಳ ಕೋಟಿ ಕಂಠ ಗಾಯನವನ್ನು ಕನ್ನಡ ಮತ್ತು ಸಂಸ್ಕೃ ತಿ ಇಲಾಖೆ ಹಮ್ಮಿಕೊಂಡಿದೆ

ಮುಖ್ಯಾಂಶಗಳು

  • ರಾಜ್ಯೋ ತ್ಸವ ಪ್ರಯುಕ್ತ ಏರ್ಪಡಿಸಿರುವ ಈ ಕಾರ್ಯಕ್ರಮದಲ್ಲಿ ಕರ್ನಾಟಕವಲ್ಲದೇ, ಅನಿವಾಸಿ ಕನ್ನಡಿಗರು, ಹೊರನಾಡ ಮತ್ತು ಗಡಿನಾಡ ಕನ್ನಡಿಗರೂ ಭಾಗವಹಿಸಲಿದ್ದಾರೆ.
  • ಈ ಬಾರಿ ಒಟ್ಟು ಐದು ಗೀತೆಗಳನ್ನು ಗಾಯನಕ್ಕಾಗಿ ಆಯ್ಕೆ ಮಾಡಲಾಗಿದೆ.

ಕುವೆಂಪು ವಿರಚಿತ ನಾಡಗೀತೆ ‘ಜಯಭಾರತ ಜನನಿಯ ತನುಜಾತೆ’ ಹಾಗೂ ‘ಬಾರಿಸು ಕನ್ನಡ ಡಿಂಡಿಮವ’, ಡಾ. ಚೆನ್ನವೀರ ಕಣವಿ ಅವರ ‘ವಿಶ್ವವಿನೂತನ ವಿದ್ಯಾಚೇತನ ಸರ್ವ ಹೃದಯ ಸಂಸ್ಕಾರಿ’, ಡಾ.ಡಿ.ಎಸ್.ಕರ್ಕಿ ಅವರ ‘ಹಚ್ಚೇ ವು ಕನ್ನಡದ ದೀಪ’, ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಗೀತೆಗಳನ್ನು ಹಾಡಲಾಗುವುದು.