Published on: February 11, 2023

ಚುಟುಕು ಸಮಾಚಾರ – 11 ಫೆಬ್ರವರಿ 2023

ಚುಟುಕು ಸಮಾಚಾರ – 11 ಫೆಬ್ರವರಿ 2023

  • ವೇಲಾ ಬಾಂಧವ್ಯ ಎಂಬ ಹೊಸ ಜಾತಿಯ ಜಿಕಾರ್ಸಿನ್ಯೂಸಿಡ್ ಏಡಿ ಪಶ್ಚಿಮ ಘಟ್ಟಗಳಲ್ಲಿ ಕಾಣಿಸಿಕೊಂಡಿದೆ.ರಾಜ್ಯದ ಉತ್ತರ ಕರ್ನಾಟಕದ ಮಧ್ಯ ಪಶ್ಚಿಮ ಘಟ್ಟಗಳಲ್ಲಿ ನೀರಿನಡಿಯಲ್ಲಿ ಪತ್ತೆಯಾಗಿದೆ. ಗೋಪಾಲಕೃಷ್ಣ ಹೆಗಡೆ ಮತ್ತು ಪರಶುರಾಮ ಭಜಂತ್ರಿ ಅವರು ಪಶ್ಚಿಮ ಘಟ್ಟದ 75 ನೇ ಏಡಿಯನ್ನು ಕಂಡುಹಿಡಿದಿದ್ದಾರೆ
  • ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್ಎಎಲ್ ಹೆಲಿಕಾಪ್ಟರ್ ವಿಭಾಗದಲ್ಲಿ ಸುಧಾರಿತ ಲಘು ಹೆಲಿಕಾಪ್ಟರ್ (ALH) ನ್ನು ಮಾರಿಷಸ್ ಸರ್ಕಾರಕ್ಕೆ ಹಸ್ತಾಂತರಿಸಿದೆ. ಎಚ್ಎಎಲ್ ಹೆಲಿಕಾಪ್ಟರ್ ನ್ನು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಹಸ್ತಾಂತರಿಸಿದೆ. ಈ ಆದೇಶವು ಸ್ನೇಹಪರ ವಿದೇಶಿ ರಾಷ್ಟ್ರಗಳಿಗೆ ರಕ್ಷಣಾ ರಫ್ತುಗಳನ್ನು ಹೆಚ್ಚಿಸಲು ಭಾರತ ಸರ್ಕಾರದ ದೃಷ್ಟಿಗೆ ಅನುಗುಣವಾಗಿದೆ.
  •  ಮುಂಬೈ-ಅಹ್ಮದಾಬಾದ್ ನಡುವಿನ ಭಾರತದ ಬಹುನಿರೀಕ್ಷಿತ ಹೈಸ್ಪೀಡ್ ರೈಲು (ಬುಲೆಟ್ ರೈಲು ಯೋಜನೆ ಕಾಮಗಾರಿ ಆರಂಭವಾಗಿದೆ. ಮುಂಬೈ-ಅಹ್ಮದಾಬಾದ್ ಹೈ ಸ್ಪೀಡ್ ರೈಲ್ ಕಾರಿಡಾರ್ ನ ಭಾಗವಾಗಿ ಮಹಾರಾಷ್ಟ್ರದ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ಹಾಗೂ ಶಿಲ್ಪಾತ ನಡುವಿನ ಡಬಲ್ ಲೈನ್ ಗಾಗಿ ಟನಲ್ ನಿರ್ಮಾಣ ಕಾಮಗಾರಿಗೆ ಚಾಲನೆ ದೊರೆತಿದೆ
  • 2022ರ ಅಕ್ಟೋಬರ್-ಡಿಸೆಂಬರ್ ಅವಧಿಯಲ್ಲಿ ವಿವಾಹವಾದ 4,536 ಅರ್ಹ ಹೆಣ್ಣುಮಕ್ಕಳಿಗೆ ಅನುಕೂಲವಾಗುವಂತೆ ವೈಎಸ್ಆರ್ ಕಲ್ಯಾಣಮಸ್ತು ಮತ್ತು ವೈಎಸ್ಆರ್ ಶಾದಿ ತೋಫ ಯೋಜನೆಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಹಣ ಬಿಡುಗಡೆ ಮಾಡಿದ್ದಾರೆ. ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಅಂಗವಿಕಲರು ಮತ್ತು ಕಟ್ಟಡ ಕಾರ್ಮಿಕ ವರ್ಗದ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಈ ಮೊತ್ತ ನೇರವಾಗಿ ಜಮಾ ಆಗಲಿದೆ.
  • ಕರ್ನಾಟಕ ತಂಡದವರು ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಖೇಲೊ ಇಂಡಿಯಾ ಯೂತ್ ಗೇಮ್ಸ್ ಫುಟ್ಬಾಲ್ ಟೂರ್ನಿಯ ಫೈನಲ್ನಲ್ಲಿ ಬೆಳ್ಳಿ ಪದಕ ಪಡೆದುಕೊಂಡರು. ಫೈನಲ್ನಲ್ಲಿ ಕರ್ನಾಟಕ ತಂಡವನ್ನು 2–0 ಗೋಲುಗಳಿಂದ ಮಣಿಸಿದ ಕೇರಳ, ಚಿನ್ನ ಗೆದ್ದುಕೊಂಡಿತು.