Published on: September 5, 2023

ಡಾಕ್ ಜನ ಸಂಪರ್ಕ ಅಭಿಯಾನ

ಡಾಕ್ ಜನ ಸಂಪರ್ಕ ಅಭಿಯಾನ

ಸುದ್ದಿಯಲ್ಲಿ ಏಕಿದೆ? ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸೇವೆಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಒಂದೇ ಸೂರಿನಡಿ ತರುವ ನಿಟ್ಟಿನಲ್ಲಿ ಕರ್ನಾಟಕ ಅಂಚೆ ಇಲಾಖೆ ಮುಂದಾಗಿದೆ. ಇದರ ಮೊದಲ ಭಾಗವಾಗಿ ಶಿರಸಿ ಅಂಚೆ ವಿಭಾಗವು ಮೂರು ದಿನಗಳ ಕಾಲ “ಡಾಕ್ ಜನ ಸಂಪರ್ಕ ಅಭಿಯಾನ” ಕಾರ್ಯಕ್ರಮವನ್ನು ಆಯೋಜಿಸಿತ್ತು.

ಮುಖ್ಯಾಂಶಗಳು

  • ಈ ಅಭಿಯಾನದಲ್ಲಿ ಇಲಾಖೆಯ ವಿವಿಧ ಉಳಿತಾಯ ಯೋಜನೆಗಳು ಮತ್ತು ಅಂಚೆ ಜೀವ ವಿಮಾ ಸೌಲಭ್ಯಗಳು/ ಅಪಘಾತ ವಿಮಾ ಯೋಜನೆಗಳ ಮಾಹಿತಿಯನ್ನು ಜನರಿಗೆ ತಿಳಿಸಲಾಯಿತು.

ಉದ್ದೇಶ

  • ಜನರಲ್ಲಿ ಆರ್ಥಿಕತೆ ಸೇವೆಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮತ್ತು ಸರ್ಕಾರದ ಸಾರ್ವಜನಿಕ ಸೇವೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳು ಎಲ್ಲಾ ಅಂಚೆ ವಿಭಾಗಗಳಿಂದ ಡಾಕ್ ಜನ ಸಂಪರ್ಕ ಅಭಿಯಾನವನ್ನು ವಿವಿಧ ಸ್ಥಳಗಳಲ್ಲಿ ಆಯೋಜಿಸಲಾಗುವುದು.