Published on: January 20, 2023

ನಾರಾಯಣಪುರ ಎಡದಂಡೆ ಕಾಲುವೆ ಯೋಜನೆ

ನಾರಾಯಣಪುರ ಎಡದಂಡೆ ಕಾಲುವೆ ಯೋಜನೆ


ಸುದ್ದಿಯಲ್ಲಿ ಏಕಿದೆ? ಪ್ರಧಾನಿ ಮೋದಿಯವರು ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಕೊಡೆಕಲ್ ಗ್ರಾಮದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಎಡದಂಡೆ ನಾಲೆಯನ್ನು ಉದ್ಘಾಟಿಸಿದರು.


ಮುಖ್ಯಾಂಶಗಳು

  • ಹೊಸ ಯೋಜನೆಯು ನೀರನ್ನು ಸಂರಕ್ಷಿಸಲು, ನೀರು ಸುಮ್ಮನೆ ಪೋಲಾಗುವುದನ್ನು ಕಡಿಮೆ ಮಾಡಲು ಮತ್ತು ಹೆಚ್ಚು ಸಮಾನವಾದ ವಿತರಣೆಯನ್ನು ನೋಡಲು ಹವಾಮಾನ ಬದಲಾವಣೆಗಾಗಿ ರಾಷ್ಟ್ರೀಯ ಕ್ರಿಯಾ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ಜಲ ಮಿಷನ್‌ನ ಭಾಗವಾಗಿದೆ.
  • ನಾರಾಯಣಪುರ ಎಡದಂಡೆ ಕಾಲುವೆಯ ವಿಸ್ತರಣೆ, ಪುನ:ಶ್ಚೇತನ ಹಾಗೂ ಆಧುನೀಕರಣದ ಸ್ಕಾಡಾ ಯೋಜನೆ-1 ದೇಶದ ಮೊದಲ ಮತ್ತು ಏಷ್ಯಾದಲ್ಲಿಯೇ ಅತಿದೊಡ್ಡ ನೀರು ನಿರ್ವಹಣೆಯ ಯೋಜನೆಯಾಗಿದೆ.
  • ನಾರಾಯಣಪುರ ಅಣೆಕಟ್ಟನ್ನು ಆಲಮಟ್ಟಿ ಅಣೆಕಟ್ಟಿನ ಕೆಳಭಾಗದಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿ 1982 ರಲ್ಲಿ ಕಾರ್ಯಾರಂಭ ಮಾಡಿತು.

ಉದ್ದೇಶ

  • ಈ ಭಾಗದ ರೈತರ ಕೃಷಿ ಚಟುವಟಿಕೆಗಳಿಗೆ ಈ ಯೋಜನೆಯಿಂದ ನೀರು ಹರಿಸುವ ಉದ್ದೇಶ ಸರ್ಕಾರದ್ದಾಗಿದೆ.

ಪ್ರಯೋಜನಗಳು 

  • ಈ ಯೋಜನೆಯಿಂದ ಯಾದಗಿರಿ, ಕಲಬುರಗಿ, ವಿಜಯಪುರ, ರಾಯಚೂರು ಜಿಲ್ಲೆಗಳ ಜನತೆಗೆ ನೀರಾವರಿ, ಕುಡಿಯುವ ನೀರಿಗೆ ಸಾಕಷ್ಟು ಉಪಯೋಗವಾಗಲಿದೆ. ಜನರ ಜೀವನ ಮಟ್ಟ ಸುಧಾರಿಸಲಿದೆ, ಉದ್ಯೋಗ ಪ್ರಮಾಣ ಹೆಚ್ಚಾಗಲಿದೆ.
  • ಈ ಜಲಾಶಯವು ಎಡ ಮತ್ತು ಬಲದಂಡೆ ಕಾಲುವೆಗಳು ಮತ್ತು ಏತ ನೀರಾವರಿ ಜಾಲಗಳ ಮೂಲಕ ಸುಮಾರು 5.40 ಲಕ್ಷ ಹೆಕ್ಟೇರ್ ಭೂಮಿಗೆ ನೀರುಣಿಸುತ್ತದೆ.
  • ನಾರಾಯಣಪುರ ಎಡದಂಡೆ ಕಾಲುವೆಯು ಕಮಾಂಡ್ ಪ್ರದೇಶಕ್ಕೆ 4.50 ಲಕ್ಷ ಹೆಕ್ಟೇರ್‌ಗೆ ನೀರು ಸರಬರಾಜು ಮಾಡುವ ಮುಖ್ಯ ದಾರಿಯಾಗಿದ್ದು, ಕಲಬುರಗಿ, ಯಾದಗಿರಿ ಮತ್ತು ವಿಜಯಪುರದ ದೀರ್ಘಕಾಲಿಕ ಬರಪೀಡಿತ ಜಿಲ್ಲೆಗಳಲ್ಲಿ ಹರಡಿದೆ. ಹುಣಸಗಿ, ಶಹಾಪುರ, ಮುಡಬಾಳ, ಜೇವರ್ಗಿ, ಇಂಡಿ ಶಾಖಾ ಕಾಲುವೆಗಳು ಹಾಗೂ ಇಂಡಿ ಏತ ಕಾಲುವೆ ಮೂಲಕ 10 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.

ಯೋಜನೆಯ ಅನುಷ್ಟಾನ

  • ಹಳೆ ಸ್ಟಿಲ್ ಗೇಟ್ಗಳಿಂದ ನೀರು ಪೋಲಾಗುವ ಜೊತೆ ಅನೇಕ ಸಮಸ್ಯೆ ಎದುರಾಗಿತ್ತು. ಗೇಟ್ಗಳ ಸಮಸ್ಯೆ ಅರಿತು,ಕೇಂದ್ರ ಸರಕಾರ ರಾಷ್ಟ್ರೀಯ ಜಲ ಮಿಷನ್ ಮೂಲಕ ರಾಜ್ಯ  ಸರಕಾರದ ಕೃಷ್ಣಾ ಭಾಗ್ಯ ಜಲ ನಿಗಮದ ಅಡಿಯಲ್ಲಿ ನಾರಾಯಣಪುರ ಎಡದಂಡೆ ಕಾಲುವೆಗಳಿಗೆ ಸ್ಕಾಡಾ ಯೋಜನೆ ಜಾರಿಗೆ ತಂದಿದೆ. ಜಿಐಎಸ್ ಆಧಾರಿತ ಸ್ವಯಂಚಾಲಿತ ಯಾಂತ್ರೀಕೃತ ಹೈಟೆಕ್  ತಂತ್ರಜ್ಞಾನದೊಂದಿಗೆ ಸ್ಕಾಡಾ ಗೇಟ್ ಅಳವಡಿಕೆ ಮಾಡಿದೆ. ರಾಜ್ಯ ಸರಕಾರ ಕೃಷ್ಣಾ ಭಾಗ್ಯ ಜಲ ನಿಗಮದ ಅಡಿಯಲ್ಲಿ ಸ್ಕಾಡಾ ಗೇಟ್ ಅಳವಡಿಕೆ ಮಾಡಿದೆ. ಕೇಂದ್ರ ಸರಕಾರ  70 ಪ್ರತಿಶತ ಹಾಗೂ ರಾಜ್ಯ ಸರಕಾರ 30 ಪ್ರತಿಶತ ಅನುದಾನದೊಂದಿಗೆ 1180 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಕಾಡಾ ಯೋಜನೆ ಮೂಲಕ ಹೈಟೆಕ್ ಗೇಟ್  ಅಳವಡಿಕೆ ಮಾಡಲಾಗಿದೆ.

ಯೋಜನೆಯ ವಿವರ:

  • ‘ಒಂದು ಹನಿ ನೀರಿಗೆ ಗರಿಷ್ಟ ನೀರಾವರಿ’ ಘೋಷಣೆಯನ್ನು ಕಾರ್ಯಗತಗೊಳಿಸುವ ಉದ್ದೇಶದಿಂದ 2012 ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಈ ಕೆಲಸವನ್ನು ಪ್ರಾರಂಭಿಸಲಾಯಿತು. 2015ರಲ್ಲಿ ಎಐಬಿಪಿ ಯೋಜನೆಯಡಿ ನಾರಾಯಣಪುರ ಎಡದಂಡೆ ಕಾಲುವೆ ವಿಸ್ತರಣೆ ಯೋಜನೆ ಒಳಗೊಂಡಿತು. ಕೇಂದ್ರ ಸರ್ಕಾರದಿಂದ 1011 ಕೋಟಿ ರೂ.ಗಳನ್ನು ನೀಡಲಾಗಿದೆ. 4.50 ಲಕ್ಷ ಹೆಕ್ಟೇರ್ ನೀರಾವರಿ ಸೌಲಭ್ಯ ಒದಗಿಸುವ ಯೋಜನೆಯಾಗಿದ್ದು, ಕಾಲುವೆ ಅಚ್ಚುಕಟ್ಟು ಪ್ರದೇಶ ಕೊನೆ ಭಾಗದ ರೈತರಿಗೂ ಈಗ ನೀರಾವರಿ ಲಭ್ಯವಾಗಲಿದೆ. ನೀರು ಪೋಲಾಗುವ ಪ್ರಮಾಣ ಕಡಿಮೆಯಾಗಿದ್ದು, ನೀರಿನ ಬಳಕೆಯ ದಕ್ಷತೆಯನ್ನು ಶೇ. 20 ರಷ್ಟು ಹೆಚ್ಚಿಸಲಾಗಿದೆ.

ಯೋಜನೆಯ ಹಿನ್ನೆಲೆ

  • 1964 ರಲ್ಲಿ ಕೇಂದ್ರ ಸಚಿವರಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಡ್ಯಾಂ ನಿರ್ಮಾಣಕ್ಕೆ ಅಡಿಗಲ್ಲು ನೆರವೇರಿಸಿದರು.ನಂತರ 1982 ರಲ್ಲಿ ಅಂದಿನ ಸಿಎಂ ಆರ್.ಗುಂಡುರಾವ್ ಸರಕಾರ ಡ್ಯಾಂ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟಿಸಿದರು.ನಾರಾಯಣಪುರ ಡ್ಯಾಂಗೆ ಬಸವಸಾಗರ ಜಲಾಶಯವೆಂದು ನಾಮಕರಣ ಮಾಡಲಾಗಿದೆ. ಇದರಿಂದ ಕಲಬುರಗಿ, ಯಾದಗಿರಿ, ವಿಜಯಪುರ,ರಾಯಚೂರು ಭಾಗದ ರೈತರಿಗೆ ನೀರಾವರಿ ಸೌಲಭ್ಯ ಕಾಣಿತ್ತು.

SCADA (supervisory control and data acquisition) ತಂತ್ರಜ್ಞಾನ:

  • ಕೈಗಾರಿಕಾ ಪ್ರಕ್ರಿಯೆಗಳನ್ನು ನಿಯಂತ್ರಿಸುವ ಸಾಫ್ಟ್‌ವೇರ್ ಅಪ್ಲಿಕೇಶನ್‌ಗಳ ಒಂದು ವರ್ಗವಾಗಿದೆ, ಇದು ಡೇಟಾ ಸಂಗ್ರಹಣೆಯಾಗಿದೆ.SCADA ಸರ್ವರ್, ಗೇಟ್‌ವೇ, ಅಥವಾ ಡೇಟಾ ಸಾಂದ್ರೀಕರಣವು ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡುವ ವಿವಿಧ ಎಲೆಕ್ಟ್ರಾನಿಕ್ ಸಾಧನಗಳಿಂದ (IEDs) ಮಾಹಿತಿಯನ್ನು ಸಂಗ್ರಹಿಸುತ್ತದೆ ಮತ್ತು ನಂತರ ಅದನ್ನು ದೂರಸ್ಥ ಮೇಲ್ವಿಚಾರಣಾ ವ್ಯವಸ್ಥೆಗೆ ಲಭ್ಯವಾಗುವಂತೆ ಪ್ರಕ್ರಿಯೆಗೊಳಿಸುತ್ತದೆ.

ಜಲ ಜೀವನ್ ಮಿಷನ್

  • ಕೇಂದ್ರ ಸರ್ಕಾರ ಜೆ ಜೆ ಮಿಷನ್ ಅನ್ನು ಆಗಸ್ಟ್ 2019 ರಲ್ಲಿ ಘೋಷಿಸಿತು. 2024 ರ ವೇಳೆಗೆ ಎಲ್ಲಾ ಗ್ರಾಮೀಣ ಕುಟುಂಬಗಳಿಗೆ ಕೊಳವೆ ನೀರು ಸರಬರಾಜು (ಹರ್ ಘರ್ ಜಲ) ಒದಗಿಸುವುದು ಮಿಷನ್‌ನ ಮುಖ್ಯ ಉದ್ದೇಶವಾಗಿದೆ. ದೇಶಾದ್ಯಂತ ಸುಸ್ಥಿರ ನೀರು ಸರಬರಾಜು ನಿರ್ವಹಣೆಯ ಉದ್ದೇಶಗಳನ್ನು ಹೊಂದಿದೆ.

ಗುರಿ

  • ಮಳೆನೀರು ಕೊಯ್ಲು, ಅಂತರ್ಜಲ ಪುನರ್ಭರ್ತಿ ಮತ್ತು ಕೃಷಿಯಲ್ಲಿ ಮರುಬಳಕೆಗಾಗಿ ಮನೆಯ ತ್ಯಾಜ್ಯ ನೀರನ್ನು ನಿರ್ವಹಿಸಲು ಸ್ಥಳೀಯ ಮೂಲಸೌಕರ್ಯಗಳನ್ನು ರಚಿಸುವ ಗುರಿಯನ್ನು ಹೊಂದಿದೆ. ಜೊತೆಗೆ, ಪಾಯಿಂಟ್ ರೀಚಾರ್ಜ್, ಸಣ್ಣ ನೀರಾವರಿ ಟ್ಯಾಂಕ್‌ಗಳ ನಿರ್ಜಲೀಕರಣ, ಕೃಷಿಗೆ ಗ್ರೇ ವಾಟರ್ ಬಳಕೆ ಮತ್ತು ಮೂಲ ಸುಸ್ಥಿರತೆಯಂತಹ ವಿವಿಧ ನೀರಿನ ಸಂರಕ್ಷಣಾ ಪ್ರಯತ್ನಗಳನ್ನೂ ಆಧರಿಸಿದೆ.

ಮಿಷನ್‌ನ ಅವಶ್ಯಕತೆ ಮತ್ತು ಮಹತ್ವ

  • ಭಾರತವು ವಿಶ್ವ ಜನಸಂಖ್ಯೆಯ ಶೇ.16 ರಷ್ಟು ಮಾನವ ಸಂಪನ್ಮೂಲ ಹೊಂದಿದೆ, ಆದರೆ ಕೇವಲ ಶೇ. ೪ ರಷ್ಟು ಸಿಹಿನೀರಿನ ಸಂಪನ್ಮೂಲಗಳನ್ನು ಹೊಂದಿದೆ. ಇದರಿಂದಾಗಿ ಅಂತರ್ಜಲ ಮಟ್ಟವನ್ನು ಕುಂಠಿತಗೊಳಿಸುವುದು, ಕಾಡಿನ ಅತಿಯಾದ ಶೋಷಣೆ ಮತ್ತು ಹದಗೆಡುತ್ತಿರುವ ನೀರಿನ ಗುಣಮಟ್ಟ, ಹವಾಮಾನ ಬದಲಾವಣೆ ಇತ್ಯಾದಿ ಸಂಗತಿಗಳು ಕುಡಿಯುವ ನೀರನ್ನು ಒದಗಿಸಲು ಇರುವ ಪ್ರಮುಖ ಸವಾಲುಗಳಾಗಿವೆ.
  • ಅಂತರ್ಜಲ ಮಟ್ಟ ಕಡಿಮೆಯಾಗುತ್ತಿರುವುದರಿಂದ, ಇಂದು ದೇಶದಲ್ಲಿ ನೀರಿನ ಸಂರಕ್ಷಣೆಯ ತುರ್ತು ಅವಶ್ಯಕತೆಯಾಗಿದೆ. ಆದ್ದರಿಂದ, ಜಲ ಜೀವನ್ ಮಿಷನ್ ಸ್ಥಳೀಯ ಮಟ್ಟದಲ್ಲಿ ಸಮಗ್ರ ಬೇಡಿಕೆ ಮತ್ತು ನೀರಿನ ಪೂರೈಕೆ ನಿರ್ವಹಣೆಯತ್ತ ಗಮನ ಹರಿಸಲಿದೆ.

ಕೃಷ್ಣ ನದಿ

  • ಮೂಲ: ಮಹಾರಾಷ್ಟ್ರದ ಸತಾರ ಜಿಲ್ಲೆಯ ಮಹಾಬಲೇಶ್ವರದ ಪಂಚಗಂಗಾ
  • ಇದು ಗಂಗಾ ಮತ್ತು ಗೋದಾವರಿ ನಂತರ ಭಾರತದ ಮೂರನೇ ಅತಿ ಉದ್ದದ ನದಿಯಾಗಿದೆ.
  • ನದಿಯನ್ನು ಕೃಷ್ಣವೇಣಿ ಎಂದೂ ಕರೆಯುತ್ತಾರೆ
  • ಉದ್ದ: 1,400 ಕಿ.ಮೀ
  • ಜಲಾನಯನ ಪ್ರದೇಶ: 258,948 km²
  • ಕೃಷ್ಣಾ ನದಿಯು ಭಾರತದ ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮೂಲಕ ಹಾದು ಬಂಗಾಳಕೊಲ್ಲಿಯನ್ನು ಸೇರುತ್ತದೆ.
  • ಉಪನದಿಗಳು
    • ಎಡ: ಯರ್ಲ, ಭೀಮ, ದಿಂಡಿ, ಮೂಸಿ, ಪಾಲೇರು, ಮುನ್ನೇರು ಬಿಟ್ಟರು
    • ಬಲ :ಕುಡಲಿ (ನಿರಂಜನ) ವೆನ್ನ, ಕೊಯ್ನಾ, ಪಂಚಗಂಗಾ, ದೂಧಗಂಗಾ, ಘಟಪ್ರಭಾ, ಮಲಪ್ರಭಾ, ತುಂಗಭದ್ರಾ

ಅಣೆಕಟ್ಟುಗಳು: ಮಹಾರಾಷ್ಟ್ರದಲ್ಲಿ ಕೊಯ್ನಾದ ಹತ್ತಿರ, ಕರ್ನಾಟಕದಲ್ಲಿ ಆಲಮಟ್ಟಿ ಮತ್ತು ನಾರಾಯಣಪುರಗಳಲ್ಲಿ ಹಾಗೂ ಆಂಧ್ರ ಪ್ರದೇಶದಲ್ಲಿ ಶ್ರೀಶೈಲಂ ಮತ್ತು ನಾಗಾರ್ಜುನಸಾಗರದಲ್ಲಿ ಕೃಷ್ಣಾ ನದಿಗೆ ಆಣೆಕಟ್ಟುಗಳನ್ನು ಕಟ್ಟಲಾಗಿದೆ