Published on: July 5, 2022

ಪ್ರತಿವಿಷ’

ಪ್ರತಿವಿಷ’

ಸುದ್ದಿಯಲ್ಲಿ ಏಕಿದೆ?

ಹಾವು ಮತ್ತಿತರ ಜಂತುಗಳ ವಿಷ ನಿಷ್ಕ್ರಿಯಗೊಳಿಸುವ ಔಷಧ ಉತ್ಪಾದಿಸಲು ನೆರವಾಗುವ ‘ಪ್ರತಿವಿಷ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ’ದ ಕಟ್ಟಡ ನಿರ್ಮಾಣಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ‘ಬೆಂಗಳೂರು ಹೆಲಿಕ್ಸ್ ಬಯೋಟೆಕ್ ಪಾರ್ಕ್’ನ ಐಬಿಎಬಿ ಸಂಸ್ಥೆ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.

ಮುಖ್ಯಾಂಶಗಳು

  • ಒಟ್ಟು ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಈ ಕೇಂದ್ರವು ಐದು ವರ್ಷಗಳಲ್ಲಿ ಅಸ್ತಿತ್ವಕ್ಕೆ ಬರಲಿದೆ.ದೇಶದಲ್ಲಿ ಪ್ರಮುಖವಾಗಿ ಹಾವಿನ ಕಡಿತದಿಂದ ಸಂಭವಿಸುತ್ತಿರುವ ರೈತರ ಸಾವಿನ ಪ್ರಮಾಣವನ್ನು ತಗ್ಗಿಸಲು ಇದು ನೆರವಾಗಲಿದೆ’.
  • ‘ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯಕರ್ನಾಟಕ ನಾವೀನ್ಯತಾ ಮತ್ತು ತಂತ್ರಜ್ಞಾನ ಸಂಸ್ಥೆ (ಕಿಟ್ಸ್), ಐಬಿಎಬಿ (ಇನ್ಸ್ಟಿಟ್ಯೂಟ್ ಆಫ್ ಬಯೋ ಇನ್ಫರ್ಮ್ಯಾಟಿಕ್ಸ್ ಆ್ಯಂಡ್ ಅಪ್ಲೈಡ್ ಬಯೊಟೆಕ್ನಾಲಜಿ) ಮತ್ತು ಭಾರತೀಯ ವಿಜ್ಞಾನ ಸಂಸ್ಥೆಯ ಸಹಭಾಗಿತ್ವದಡಿ ಈ ನೂತನ ಸಂಶೋಧನಾ ಕೇಂದ್ರವು ಅಸ್ತಿತ್ವಕ್ಕೆ ಬರುತ್ತಿದೆ. ಇಂತಹ ಒಂದು ಕೇಂದ್ರವು ಭಾರತದಲ್ಲೇ ಮೊದಲನೆಯದಾಗಿದೆ’.
  • 16 ಸಾವಿರ ಚದರಡಿ ವಿಸ್ತೀರ್ಣದಲ್ಲಿ ಈ ಕೇಂದ್ರವು ಕಾರ್ಯಾರಂಭ ಮಾಡಲಿದೆ. ಇಲ್ಲಿನ ಸರ್ಪಾಗಾರದಲ್ಲಿ 23 ಪ್ರಭೇದಗಳಿಗೆ ಸೇರಿದ 500ಕ್ಕೂ ಹೆಚ್ಚು ಬಗೆಯ ವಿಷಯುಕ್ತ ಜಂತುಗಳನ್ನು ಅಧ್ಯಯನದ ಸಲುವಾಗಿ ಇಡಲಾಗುವುದು.
  • ಜತೆಗೆ, ಭಾರತೀಯ ಉಪಖಂಡದಲ್ಲಿರುವ ವಿಷಪೂರಿತ ಚೇಳುಗಳು ಮತ್ತು ಜೇಡದ ಹುಳುಗಳು ಕೂಡ ಇರಲಿವೆ. ಪ್ರತಿವಿಷ ಚಿಕಿತ್ಸೆಯಲ್ಲಿ ಸಂಶೋಧನೆ ನಡೆಸುವ ಆಸಕ್ತಿ ಇರುವ ನವೋದ್ಯಮಗಳಿಗೆ ಉತ್ತೇಜನ ನೀಡಲಾಗುವುದು’. ‘ದೇಶದಲ್ಲಿ ಪ್ರತಿ ವರ್ಷ ಸರಾಸರಿ 58 ಸಾವಿರ ಸಾವುಗಳು ಹಾವುಗಳ ಕಡಿತದಿಂದ ಸಂಭವಿಸುತ್ತಿದ್ದು, 1.37 ಲಕ್ಷದಷ್ಟು ಮಂದಿ ಅಂಗವೈಕಲ್ಯಕ್ಕೆ ಒಳಗಾಗುತ್ತಿರುವುದು ಆತಂಕದ ಸಂಗತಿ.
  • ಈ ಕೇಂದ್ರವು ಅತ್ಯಾಧುನಿಕ ವೈಜ್ಞಾನಿಕ ತಂತ್ರಜ್ಞಾನಗಳ ಮೂಲಕ ಪ್ರತಿವಿಷ ಥೆರಪಿಗಳನ್ನು ಅಭಿವೃದ್ಧಿ ಪಡಿಸಲಿದೆ’.

ಉದ್ದೇಶ

  • ‘ಪರಿಸರದಲ್ಲಿ ಹಾವಿನಂತಹ ಸರೀಸೃಪಗಳಿಗೂ ಪ್ರಮುಖ ಸ್ಥಾನವಿದೆ. ಆದರೆ, ಅವುಗಳ ಕಡಿತದಿಂದ ಉಂಟಾಗುವ ಸಾವು ನೋವುಗಳನ್ನು ಕಡಿಮೆ ಮಾಡುವ ಜೀವರಕ್ಷಕ ಪ್ರತಿವಿಷಗಳು ಅತ್ಯಗತ್ಯ. ಈ ನಿಟ್ಟಿನಲ್ಲಿ ಈಗ ಇರುವ ಕೊರತೆಯನ್ನು ಹೋಗಲಾಡಿಸುವುದು ನೂತನ ಕೇಂದ್ರದ ಗುರಿಯಾಗಿದೆ’.

ಏನೇನು ಇರಲಿದೆ?

  • ಸರ್ಪಾಗಾರ
  • ಸಂಶೋಧನಾ ಪ್ರಯೋಗಾಲಯ
  • ವಿಷ ಸಂಗ್ರಹಣಾ ವ್ಯವಸ್ಥೆ
  • ಇನ್ಕ್ಯೂಬೇಷನ್ ಸೌಲಭ್ಯ
  • ಡಿಜಿಟಲ್ ಗ್ರಂಥಾಲಯ