Published on: December 13, 2022

ವನ್ಯಜೀವಿ (ಸಂರಕ್ಷಣೆ) ತಿದ್ದುಪಡಿ ಕಾಯ್ದೆ, 2021

ವನ್ಯಜೀವಿ (ಸಂರಕ್ಷಣೆ) ತಿದ್ದುಪಡಿ ಕಾಯ್ದೆ, 2021

ಸುದ್ದಿಯಲ್ಲಿ ಏಕಿದೆ? ಸಂರಕ್ಷಿತ ಅರಣ್ಯ ಪ್ರದೇಶದ ನಿರ್ವಹಣೆಯನ್ನು ಉತ್ತಮಗೊಳಿಸುವುದಕ್ಕಾಗಿ ಸಿದ್ಧಪಡಿಸಲಾಗಿರುವ ವನ್ಯಜೀವಿ (ಸಂರಕ್ಷಣೆ) ತಿದ್ದುಪಡಿ ಕಾಯ್ದೆ, 2021 ಅನ್ನು ರಾಜ್ಯಸಭೆ ಅಂಗೀಕರಿಸಿದೆ.

ಮುಖ್ಯಾಂಶಗಳು

  • ರಾಜ್ಯಸಭೆಯಲ್ಲಿ ಈ ಮಸೂದೆಯನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.
  • ಲೋಕಸಭೆಯು ಮುಂಗಾರು ಅಧಿವೇಶನದಲ್ಲಿ ಈ ಮಸೂದೆಯನ್ನು  ಅಂಗೀಕರಿಸಿತ್ತು. ಸಂಸದೀಯ ಸಮಿತಿಯು ಈ ಮಸೂದೆಯ ಪರಿಶೀಲನೆ ನಡೆಸಿದೆ.
  • ಮಸೂದೆಯಲ್ಲಿರುವ ಪರಿಕಲ್ಪನೆಗಳು: ‘ಸಂರಕ್ಷಣೆ’ ಹಾಗೂ ‘ನಿರ್ವಹಣೆ’

ಮಸೂದೆಯಲ್ಲಿರುವ ಅಂಶಗಳು

  • ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿ ಜಾನುವಾರುಗಳನ್ನು ಮೇಯಿಸಲು ಮತ್ತು ಅರಣ್ಯ ಪ್ರದೇಶದಿಂದ ಕುಡಿಯಲು ಹಾಗೂ ಮನೆಬಳಕೆಗೆ ನೀರು ಪಡೆದುಕೊಳ್ಳಲು ಮಸೂದೆಯಲ್ಲಿ ಅವಕಾಶ ನೀಡಲಾಗಿದೆ.
  • ವನ್ಯಜೀವಿ (ಸಂರಕ್ಷಣೆ) ಕಾಯ್ದೆ 1972ರ ಪ್ರಕಾರ ಮಾಡಲಾದ ಸಸ್ಯ ಪ್ರಭೇದ ಹಾಗೂ ಪ್ರಾಣಿಗಳ ಪಟ್ಟಿಯನ್ನು ತರ್ಕಬದ್ಧವಾದ ರೀತಿಯಲ್ಲಿ ಮರುರೂಪಿಸಲು ವನ್ಯಜೀವಿ (ಸಂರಕ್ಷಣೆ) ತಿದ್ದುಪಡಿ ಕಾಯ್ದೆಯಲ್ಲಿ ಅವಕಾಶ ಕೊಡಲಾಗಿದೆ.
  • ಕಾಡಿಗೆ ಮಾರಕವಾಗಿರುವ ವಿದೇಶಿ ಪ್ರಭೇದದ ಸಸ್ಯಗಳನ್ನು ನಿಯಂತ್ರಿಸಲು ಹಾಗೂ ಕೇಂದ್ರ ಸರ್ಕಾರವು ನಿಗದಿ ಮಾಡಿರುವ ಷರತ್ತುಗಳಿಗೆ ಅನುಗುಣವಾಗಿ ಪ್ರಮಾಣಪತ್ರ ಪಡೆದಿರುವ ಆನೆಯ ಮಾಲೀಕರು ಆನೆಗಳನ್ನು ಸಾಗಿಸಲು ಅವಕಾಶ ನೀಡುವ ಅಂಶವೂ ಮಸೂದೆಯಲ್ಲಿ ಇದೆ.
  • ಅಳಿವಿನಂಚಿನಲ್ಲಿರುವ ವನ್ಯಜೀವಿ ಮತ್ತು ಸಸ್ಯಗಳ ಅಂತರರಾಷ್ಟ್ರೀಯ ವ್ಯಾಪಾರವನ್ನು ನಿಯಂತ್ರಿಸುವ ಸಲುವಾಗಿ ಮೂಲ ಕಾಯ್ದೆಗೆ ಹೊಸ ಭಾಗ ‘5ಬಿ’ ಅನ್ನು ಸೇರಿಸಲಾಗಿದೆ.
  • ರಾಜ್ಯಗಳು ಈ ಕುರಿತು ಸ್ಥಾಯಿ ಸಮಿತಿಗಳನ್ನು ರಚಿಸಿಕೊಳ್ಳಬಹುದಾಗಿದೆ.

ಉದ್ದೇಶ

  • ಈ ರೀತಿಯ ಪರಿಷ್ಕರಣೆಯು ಸಸ್ಯ ಹಾಗೂ ಪ್ರಾಣಿಗಳ ಸಂರಕ್ಷಣೆಯ ಕಾರ್ಯವನ್ನು ಹೆಚ್ಚು ಪರಿಣಾಮಕಾರಿ ಮಾಡಲಿದೆ.

ವನ್ಯಜೀವಿ ಸಂರಕ್ಷಣೆ ಎಂದರೆ :

  • ವನ್ಯಜೀವಿ ಸಂರಕ್ಷಣೆಯು ವನ್ಯಜೀವಿಗಳನ್ನು ನಾಶವಾಗದಂತೆ ರಕ್ಷಿಸುವ ಕ್ರಿಯೆಯನ್ನು ಸೂಚಿಸುತ್ತದೆ. ವನ್ಯಜೀವಿ ಸಂರಕ್ಷಣೆಯ ಪ್ರಾಮುಖ್ಯತೆ :
  • ಪಕ್ಷಿಗಳು ಪರಿಸರ ವ್ಯವಸ್ಥೆಯಲ್ಲಿ ಕೀಟಗಳ ಜನಸಂಖ್ಯೆಯನ್ನು ನಿಯಂತ್ರಿಸುತ್ತವೆ. ಅದಕ್ಕಾಗಿಯೇ ನಮ್ಮ ಪರಿಸರ ವ್ಯವಸ್ಥೆಯ ಸಮತೋಲನವನ್ನು ಕಾಪಾಡಿಕೊಳ್ಳಲು ವನ್ಯಜೀವಿಗಳ ಸಂರಕ್ಷಣೆ ಮುಖ್ಯವಾಗಿದೆ. ಈ ಭೂಮಿಯ ಮೇಲಿನ ಪ್ರತಿಯೊಂದು ಜೀವಿಯು ನೈಸರ್ಗಿಕ ಸಮತೋಲನವನ್ನು ಕಾಪಾಡಿಕೊಳ್ಳಲು ಪ್ರಕೃತಿಗೆ ಸಹಾಯ ಮಾಡಲು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತದೆ

ಪ್ರಾಣಿಗಳನ್ನು ರಕ್ಷಿಸುವ ಕಾನೂನುಗಳು :

  1. ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ ಪ್ರಾಣಿಗಳ ಮೇಲಿನ ಅನಾವಶ್ಯಕ ನೋವು ಅಥವಾ ಸಂಕಟವನ್ನು ತಡೆಗಟ್ಟಲು ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆಗೆ ಸಂಬಂಧಿಸಿದ ಕಾನೂನುಗಳನ್ನು ತಿದ್ದುಪಡಿ ಮಾಡಲು 1960 ರಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯನ್ನು ಜಾರಿಗೊಳಿಸಲಾಯಿತು.
  2. ವನ್ಯಜೀವಿ ಸಂರಕ್ಷಣಾ ಕಾಯಿದೆ ಭಾರತ ಸರ್ಕಾರವು ಈ ದೇಶದ ವನ್ಯಜೀವಿಗಳನ್ನು ಪರಿಣಾಮಕಾರಿಯಾಗಿ ರಕ್ಷಿಸುವ ಉದ್ದೇಶದಿಂದ ವನ್ಯಜೀವಿ (ರಕ್ಷಣೆ) ಕಾಯಿದೆ 1972 ಅನ್ನು ಜಾರಿಗೊಳಿಸಿತು. ಅಳಿವಿನಂಚಿನಲ್ಲಿರುವ ಸಸ್ಯ ಮತ್ತು ಪ್ರಾಣಿಗಳು ಮತ್ತು ಪರಿಸರ ವಿಜ್ಞಾನದ ಪ್ರಮುಖ ಸಂರಕ್ಷಿತ ಪ್ರದೇಶಗಳಿಗೆ ರಕ್ಷಣೆ ಒದಗಿಸುವುದು ಉದ್ದೇಶವಾಗಿದೆ.