Published on: November 24, 2021

ವಿಜ್ಞಾನಿ ಜಗದೀಶ್ ಚಂದ್ರ ಬೋಸ್ ಪುಣ್ಯಸ್ಮರಣೆ

ವಿಜ್ಞಾನಿ ಜಗದೀಶ್ ಚಂದ್ರ ಬೋಸ್ ಪುಣ್ಯಸ್ಮರಣೆ

ಸುದ್ಧಿಯಲ್ಲಿ ಏಕಿದೆ ?  ಭಾರತದ ವಿಜ್ಞಾನಿ ಜಗದೀಶ್ ಚಂದ್ರ ಬೋಸ್ ಅವರ  ಪುಣ್ಯಸ್ಮರಣೆ ದಿನವಾದ ಇಂದು( ನ.23) ದೇಶದ ವಿವಿಧ ರಂಗಗಳ ಗಣ್ಯರು ಅನಂತ ನಮನಗಳನ್ನು ಸಲ್ಲಿಸಿದ್ದಾರೆ.

  • ಸಸ್ಯಸಂಕುಲಕ್ಕೂ ಭಾವನೆಗಳಿವೆ ಎಂಬ ಅವರ ವೈಜ್ಞಾನಿಕ ಪ್ರತಿಪಾದನೆ ಜಾಗತಿಕ ಮಟ್ಟದಲ್ಲಿ ದೇಶಕ್ಕೆ ಹಿರಿಮೆ ತಂದುಕೊಟ್ಟಿತ್ತು.‌ ಅವರ ಸಾಧನೆ, ಕೊಡುಗೆಗಳು ಸ್ಮರಣೀಯ

ಸರ್ ಜಗದೀಶ್‌ಚಂದ್ರ ಬೋಸ್

  • ಸರ್ ಜಗದೀಶ್‌ಚಂದ್ರ ಬೋಸ್, (ನವೆಂಬರ್ ೩೦, ೧೮೫೮ – ನವೆಂಬರ್ ೨೩, ೧೯೩೭) ಒಬ್ಬ ಬಹುಮುಖ ಪ್ರತಿಭೆಯ ಬಂಗಾಲಿ ಮೂಲದ ಭೌತಶಾಸ್ತ್ರ ಹಾಗು ಜೀವಶಾಸ್ತ್ರ ವಿಜ್ಞಾನಿ.
  • ರೇಡಿಯೊ, ದೂರಸಂಪರ್ಕ, ಪ್ರಕಾಶ ಶಾಸ್ತ್ರ, ಸಸ್ಯ ಜೀವಶಾಸ್ತ್ರ ಹೀಗೆ ಅನೇಕ ವಿಜ್ಞಾನದ ವಿಭಾಗದಲ್ಲಿ ಸಂಶೋಧನೆ ನೆಡೆಸಿದ್ದ ಬೋಸರು ಅವರ ಕಾಲದ ಶ್ರೇಷ್ಟ ವಿಜ್ಞಾನಿಗಳಲ್ಲೊಬ್ಬರಾಗಿದ್ದರು.
  • ಬೋಸರು ಸಸ್ಯಗಳು ಸಹ ಪ್ರಾಣಿಗಳ ಹಾಗೆ ಹೊರ ಪ್ರಭಾವಗಳಿಗೆ ಸ್ಪಂದಿಸುತ್ತವೆಂದು ಜಗತ್ತಿಗೆ ಸಾಬೀತು ಮಾಡಿ ತೊರಿಸಿದವರು. ಭಾರತ ಉಪಖಂಡದಲ್ಲಿ ಪ್ರಯೋಗವಿಜ್ಞಾನಕ್ಕೆ ಅಡಿಪಾಯ ಹಾಕಿದವರು ಇವರು.
  • ರೇಡಿಯೋ ವಿಜ್ಞಾನದ ತಂದೆ ಎಂದೂ , ಬೆಂಗಾಲಿ ವಿಜ್ಞಾನಸಾಹಿತ್ಯದ ತಂದೆ ಎಂದೂ ಇವರನ್ನು ಪರಿಗಣಿಸಲಾಗುತ್ತದೆ. ತಮ್ಮ ಸಂಶೋಧನೆಗಳಿಗೆ ನೆರವಾಗುವಂತಹ ಅನೇಕ ಉಪಕರಣಗಳನ್ನು (ಕ್ರೆಸ್ಕೊಗ್ರಾಫ್ ಹಾಗು ಕೊಹೆರರ್) ತಾವೇ ಸ್ವತಃ ಕಂಡುಹಿಡಿದಿದ್ದರು.
  • ಅಮೇರಿಕದ ಪೇಟೆಂಟ್ ತೆಗೆದುಕೊಂಡವರಲ್ಲಿ ಭಾರತೀಯ ಉಪಖಂಡದ ಮೊದಲಿಗರು.