Published on: October 12, 2021

ಸುದ್ಧಿ ಸಮಾಚಾರ 12 ಅಕ್ಟೋಬರ್ 2021

ಸುದ್ಧಿ ಸಮಾಚಾರ 12 ಅಕ್ಟೋಬರ್ 2021

  • ಸೈಬರ್ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರು ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ವರ್ಷದಿಂದ ವರ್ಷಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಎನ್ಸಿಆರ್ಬಿ ಇತ್ತೀಚೆಗೆ ಬಿಡುಗಡೆ ಮಾಡಿರುವ ವರದಿಯಂತೆ ದೇಶದಲ್ಲಿ 2020ರಲ್ಲಿ 18,657 ಸೈಬರ್ ಅಪರಾಧ ಪ್ರಕರಣ ದಾಖಲಾಗಿದೆ.
  • ಅಲಹಾಬಾದ್ ಹೈಕೋರ್ಟ್ ನ ಹಿರಿಯ ನ್ಯಾಯಾಧೀಶ, ಜಸ್ಟೀಸ್ ರಿತು ರಾಜ್ ಅವಸ್ತಿ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ
  • ರಾಜ್ಯದ ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಕೇಂದ್ರಗಳಲ್ಲಿ ಕಲ್ಲಿದ್ದಲು ಕೊರತೆಯಿಂದಾಗಿ ಹಲವು ಘಟಕಗಳನ್ನು ಅನಿವಾರ್ಯವಾಗಿ ಸ್ಥಗಿತಗೊಳಿಸಲಾಗಿದೆ. ಇದರಿಂದ ಜಲ ವಿದ್ಯುತ್ ಉತ್ಪಾದನಾ ಕೇಂದ್ರಗಳ ಮೇಲೆ ಹೆಚ್ಚಿನ ಒತ್ತಡ ಉಂಟಾಗಿದೆ
  • ಬಿಎಂಆರ್ಸಿಎಲ್ ಅಕ್ಟೋಬರ್ 21 ರಂದು, ಬಹುನಿರೀಕ್ಷಿತ ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ ಬಿಡುಗಡೆ ಮಾಡುತ್ತಿದೆ. ನಮ್ಮ ಮೆಟ್ರೋದಲ್ಲಿ ಮಾತ್ರವಲ್ಲದೆ ಶಾಪಿಂಗ್ಗೂ ಇದನ್ನು ಉಪಯೋಗ ಮಾಡಬಹುದಾಗಿದೆ
  • ಗುಜರಾತ್ನ ಮುಂದ್ರಾ ಬಂದರಿನಲ್ಲಿ ಅಂದಾಜು 20,000 ಕೋಟಿ ರೂ ಮೌಲ್ಯದ 2,998 ಕೆಜಿ ಹೆರಾಯಿನ್ ಪತ್ತೆಯಾದ ಸುಮಾರು ಒಂದು ತಿಂಗಳ ಬಳಿಕ, ಈ ಬಂದರನ್ನು ನಿರ್ವಹಣೆ ಮಾಡುತ್ತಿರುವ ಅದಾನಿ ಪೋರ್ಟ್ಸ್ ಮತ್ತು ವಿಶೇಷ ಆರ್ಥಿಕ ವಲಯ (ಎಪಿಎಸ್ಇಜೆಡ್) ಮಹತ್ವದ ಪ್ರಕಟಣೆ ಮಾಡಿದೆ. ನವೆಂಬರ್ 15 ರಿಂದ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಇರಾನ್ ದೇಶಗಳಿಂದ ಹೊರಡುವ ಯಾವುದೇ ಕಂಟೇನರ್ ಸರಕು ಸಾಗಣೆ ಹಡಗಿನ ನಿರ್ವಹಣೆ ಮಾಡುವುದಿಲ್ಲ ಎಂದು ತಿಳಿಸಿದೆ.
  • ಭಾರತೀಯ ಬಾಹ್ಯಾಕಾಶಯಾನ ಕ್ಷೇತ್ರದಲ್ಲಿ ಗ್ರಾಹಕನಾಗಿ ಕಾಲಿಡುತ್ತಿರುವ ಮೊದಲ ಸಂಸ್ಥೆ ಎನ್ನುವ ಹೆಗ್ಗಳಿಕೆಗೆ ಉದ್ಯಮಿ, ಏರ್ಟೆಲ್ ಮಾಲೀಕ ಸುನಿಲ್ ಭಾರ್ತಿ ಮಿತ್ತಲ್ ಅವರ ಒನ್ ವೆಬ್ ಸಂಸ್ಥೆ ಪಾತ್ರವಾಗಲಿದೆ.
  • 2021ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು, ಮೂವರು ಅಮೆರಿಕ ಮೂಲದ ಅರ್ಥಶಾಸ್ತ್ರಜ್ಞರು ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ. ಕಾರ್ಮಿಕ ವರ್ಗದ ಆರ್ಥಿಕತೆಗೆ ಸಂಬಂಧಿಸಿದಂತೆ ಸಲ್ಲಿಸಿದ ಸೇವೆಗೆ ಡೇವಿಡ್ ಕಾರ್ಡ್ ಅವರಿಗೆ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿಯ ಇನ್ನುಳಿದ ಅರ್ಧ ಭಾಗವವನ್ನು ಜೋಶುವಾ ಮತ್ತು ಗ್ವಿಡೋ ನಡುವೆ ಹಂಚಿಕೆ ಮಾಡಲಾಗಿದೆ.