Published on: August 30, 2022

ಹುಲಿ ಕಾರಿಡಾರ್ನಲ್ಲಿ ಹೆದ್ದಾರಿ

ಹುಲಿ ಕಾರಿಡಾರ್ನಲ್ಲಿ ಹೆದ್ದಾರಿ

ಸುದ್ದಿಯಲ್ಲಿ ಏಕಿದೆ?

ಭಾರತಮಾಲಾ ಪರಿಯೋಜನಾ ಅಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎ) ಬೆಳಗಾವಿ– ಗೋವಾ ನಡುವೆ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್‌ 748 ಎಎ) ಮೇಲ್ದರ್ಜೆಗೆ ಏರಿಸುವ ಕಾಮಗಾರಿಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಕಡ್ಡಾಯ ಎಂದು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್‌ಟಿಸಿಎ) ನಿರ್ದೇಶಿಸಿದೆ.

ಮುಖ್ಯಾಂಶಗಳು

  • ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ (ಈ ಯೋಜನೆಯ ಉಸ್ತುವಾರಿ ವಹಿಸಿರುವ ಯೋಜನಾ ನಿರ್ದೇಶಕರ ಕಚೇರಿ ಧಾರವಾಡದಲ್ಲಿದೆ) ಬರೆದಿರುವ ಎನ್‌ಟಿಸಿಎ, ‘ಈ ರಾಷ್ಟ್ರೀಯ ಹೆದ್ದಾರಿಯು ಕಾಳಿ ಹುಲಿ ಸಂರಕ್ಷಿತ ಪ್ರದೇಶ, ದಾಂಡೇಲಿ ಸಂರಕ್ಷಿತ ಪ್ರದೇಶ (ಕ್ಯಾಸಲ್‌ರಾಕ್‌), ಭೀಮಘಡ ವನ್ಯಜೀವಿ ಧಾಮ, ಮೊಲ್ಲೆಮ್‌ ರಾಷ್ಟ್ರೀಯ ಉದ್ಯಾನ, ಸಹ್ಯಾದಿ ಹುಲಿ ಸಂರಕ್ಷಿತ ಪ್ರದೇಶ, ರಾಧಾನಗರಿ ವನ್ಯಜೀವಿ ಧಾಮ, ತಿಲ್ಲಾರಿ ಅರಣ್ಯ ‍ಪ್ರದೇಶ, ಮೇದೈ ವನ್ಯಜೀವಿಧಾಮ ಹಾಗೂ ಹುಲಿ ಕಾರಿಡಾರ್‌ನಲ್ಲಿ ಹಾದು ಹೋಗುತ್ತದೆ.
  • ಹೀಗಾಗಿ, ಕಾಮಗಾರಿ ಆರಂಭಕ್ಕೆ ಮುನ್ನ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಅನುಮೋದನೆ ಪಡೆಯಬೇಕು. ಇದಕ್ಕಾಗಿ ಕೇಂದ್ರ ಪರಿಸರ, ಅರಣ್ಯ ಹಾಗೂ ತಾಪಮಾನ ಬದಲಾವಣೆ ಸಚಿವಾಲಯದ ಪರಿವೇಶ್‌ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು’ ಎಂದು ಸೂಚಿಸಿದೆ.

ಹಿನ್ನಲೆ

  • 220 ಕೋಟಿ ವೆಚ್ಚದಲ್ಲಿ 69 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಪ್ರಕ್ರಿಯೆ ಆರಂಭಿಸಿತ್ತು. ಗುರುಗ್ರಾಮದ ಎನ್‌ಎಸ್‌ಸಿ ಪ್ರಾಜೆಕ್ಟ್‌ ಸಂಸ್ಥೆಗೆ ಕಾಮಗಾರಿಯ ಗುತ್ತಿಗೆಯನ್ನು ಈ ವರ್ಷದ ಮಾರ್ಚ್‌2022ರಲ್ಲಿ ವಹಿಸಲಾಗಿತ್ತು.
  • ಹೆದ್ದಾರಿಯು ವನ್ಯಜೀವಿ ಧಾಮದೊಳಗೆ ಹಾದು ಹೋಗುತ್ತಿದ್ದು, ಪರಿಸರ ಅನುಮೋದನೆ ಪಡೆಯದೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ವನ್ಯಜೀವಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಸಂಬಂಧ ಕರ್ನಾಟಕದ ವನ್ಯಜೀವಿ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಉತ್ತರ ನೀಡಿದ್ದ ಪ್ರಾಧಿಕಾರ, ‘ಈ ಯೋಜನೆಗೆ ಪರಿಸರ ಅನುಮೋದನೆ ಪಡೆಯಬೇಕಿಲ್ಲ. 4.46 ಹೆಕ್ಟೇರ್‌ನಷ್ಟು ಅರಣ್ಯೇತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತದೆ’ ಎಂದು ಪ್ರತಿಕ್ರಿಯಿಸಿತ್ತು.

ಸಂಪರ್ಕ

  • ‘ಈ ಹೆದ್ದಾರಿ ಬೆಳಗಾವಿ ಜಿಲ್ಲೆಯ ಪಿರನವಾಡಿ, ನಾವಗೆ, ಕಿನಯೆ, ಕುಸುಮಲ್ಲಿ, ಜಾಂಬೋಟಿ, ಕಲ್ಮನಿ, ಕಣಕುಂಬಿ ಮೂಲಕ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುತ್ತದೆ. ಪರಿಸರ ಅನುಮೋದನೆ ಅಗತ್ಯ ಇಲ್ಲ ಎಂದು ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.
  • ಗುತ್ತಿಗೆ ವಹಿಸಿಕೊಂಡ ಸಂಸ್ಥೆಯು ಕಾಮಗಾರಿಯ ಸರ್ವೆ ಆರಂಭಿಸಿದೆ. ಈ ಹೆದ್ದಾರಿ ಹಾದುಹೋಗುವ ಪ್ರದೇಶಗಳಲ್ಲಿ ಹುಲಿಗಳು ಇವೆ ಎಂಬುದು ಹುಲಿಗಳ ಸಮೀಕ್ಷೆಯಲ್ಲಿ (2018ರ ಸಮೀಕ್ಷೆ) ಗೊತ್ತಾಗಿದೆ. ಅಲ್ಲದೆ, ಆನೆ, ಚಿರತೆ, ಹಾರ್ನ್‌ಬಿಲ್‌ ಸೇರಿ ಅನೇಕ ಪ್ರಭೇದಗಳಿವೆ. ಅಳಿವಿನಂಚಿನ ಕೆಲ ಪ್ರಾಣಿಗಳೂ ಇವೆ.
  • ಹೆದ್ದಾರಿ ನಿರ್ಮಾಣದಿಂದ ಇವುಗಳಿಗೆ ತೊಂದರೆ ಆಗಲಿದೆ’ ಎಂದು ದೂರಿನಲ್ಲಿದೆ.  ‘ಇದೇ ಭಾಗದಲ್ಲಿ ಕಳಸಾ– ಬಂಡೂರಿ ಯೋಜನೆಗಾಗಿ 49 ಹೆಕ್ಟೇರ್‌ ಅರಣ್ಯ ಭೂಮಿ ಸ್ವಾಧೀನಪಡಿಸಿಕೊಳ್ಳಲು ಕರ್ನಾಟಕ ನೀರಾವರಿ ನಿಗಮವು ಕರ್ನಾಟಕ ಅರಣ್ಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ. ಒಂದು ವೇಳೆ, ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಯಾದರೆ ವನ್ಯಜೀವಿ ಧಾಮಗಳು ಮತ್ತಷ್ಟು ಛಿದ್ರ ಆಗಲಿವೆ’ ಅಂದಾಜಿಸಲಾಗಿದೆ.

ಭಾರತಮಾಲಾ ಪರಿಯೋಜನಾ

  • ಭಾರತ್‌ಮಾಲಾ ಯೋಜನೆಯು ಅಡೆತಡೆಗಳನ್ನು ಕಡಿಮೆ ಮಾಡುವ ಮತ್ತು ಆರ್ಥಿಕ ಕಾರಿಡಾರ್‌ಗಳನ್ನು ದೇಶದಾದ್ಯಂತ ಬೆಳವಣಿಗೆಯ ಕೇಂದ್ರಗಳೊಂದಿಗೆ ಸಂಪರ್ಕಿಸುವ ಗುರಿಯನ್ನು ಹೊಂದಿರುವ ಪ್ಯಾನ್-ಇಂಡಿಯಾ ಹೆದ್ದಾರಿ ಅಭಿವೃದ್ಧಿ ಕಾರ್ಯಕ್ರಮವಾಗಿದೆ.
  • ಸಂಪರ್ಕವನ್ನು ಸುಧಾರಿಸುವ ಉದ್ದೇಶದಿಂದ, ವಿಶೇಷವಾಗಿ ಆರ್ಥಿಕ ಕಾರಿಡಾರ್‌ಗಳು, ಗಡಿ ಪ್ರದೇಶಗಳು ಮತ್ತು ದೂರದ ಪ್ರದೇಶಗಳಲ್ಲಿ, ಕೇಂದ್ರ ಸರ್ಕಾರವು 2017 ರಲ್ಲಿ ಮಹತ್ವಾಕಾಂಕ್ಷೆಯ ಹೆದ್ದಾರಿ ಅಭಿವೃದ್ಧಿ ಯೋಜನೆಯನ್ನು ಪ್ರಾರಂಭಿಸಿತು – ಭಾರತ್‌ಮಲಾ ಯೋಜನೆ( ಭರತಮಾಲಾ ಪರಿಯೋಜನ ).

ಭಾರತ್ಮಾಲಾ ಯೋಜನೆಯ ವಿವರಗಳು

  • ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಯೋಜನೆ (ಎನ್‌ಎಚ್‌ಡಿಪಿ) ನಂತರ ಭಾರತದ ಎರಡನೇ ಅತಿ ದೊಡ್ಡ ಹೆದ್ದಾರಿಗಳ ನಿರ್ಮಾಣ ಯೋಜನೆ ಎಂದು ಭರತಮಾಲಾ ಪರಿಯೋಜನ ಎಂದು ಹೆಸರಿಸಲಾಗಿದೆ.
  • ಕೇಂದ್ರದ ಪ್ರಮುಖ ಭಾರತ್ಮಾಲಾ ಯೋಜನೆಯಡಿ ನಿರ್ಮಿಸಲಾದ ರಸ್ತೆ ಜಾಲವು ಸರಕುಗಳ ತ್ವರಿತ ಚಲನೆಯನ್ನು ಬೆಂಬಲಿಸುತ್ತದೆ ಮತ್ತು ಅಂತರರಾಷ್ಟ್ರೀಯ ವ್ಯಾಪಾರವನ್ನು ಹೆಚ್ಚಿಸುತ್ತದೆ.
  • “ಭಾರತ್ಮಾಲಾ ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡುತ್ತದೆ, ರಫ್ತು ಮತ್ತು ಹೂಡಿಕೆಯ ಮೇಲೆ ಪರಿಣಾಮ ಬೀರುತ್ತದೆ”.
  • ಆರ್ಥಿಕ ಕಾರಿಡಾರ್‌ಗಳು, ಅಂತರ ಕಾರಿಡಾರ್‌ಗಳು ಮತ್ತು ಫೀಡರ್ ಮಾರ್ಗಗಳ ಅಭಿವೃದ್ಧಿ, ರಾಷ್ಟ್ರೀಯ ಕಾರಿಡಾರ್ ದಕ್ಷತೆಯ ಸುಧಾರಣೆ, ಗಡಿ ಮತ್ತು ಅಂತರರಾಷ್ಟ್ರೀಯ ಸಂಪರ್ಕ ರಸ್ತೆಗಳು, ಕರಾವಳಿ ಮತ್ತು ದೇಶಗಳಂತಹ ಪರಿಣಾಮಕಾರಿ ಮಧ್ಯಸ್ಥಿಕೆಗಳ ಮೂಲಕ ನಿರ್ಣಾಯಕ ಮೂಲಸೌಕರ್ಯದ ಅಂತರವನ್ನು ನಿವಾರಿಸುವ ಮೂಲಕ ದೇಶಾದ್ಯಂತ ಸರಕು ಮತ್ತು ಪ್ರಯಾಣಿಕರ ಸಂಚಾರದ ದಕ್ಷತೆಯನ್ನು ಉತ್ತಮಗೊಳಿಸುವ ಬಗ್ಗೆ ಈ ಯೋಜನೆ ಗಮನಹರಿಸುತ್ತದೆ. ಬಂದರು ಸಂಪರ್ಕ ರಸ್ತೆಗಳು ಮತ್ತು ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳು ”ಎಂದು ರಸ್ತೆ ಸಾರಿಗೆ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ

  • ದೇಶದಲ್ಲಿ ಹುಲಿಗಳ ಸಂರಕ್ಷಣೆಗಾಗಿ 1973ರಲ್ಲಿ ಪ್ರಾಜೆಕ್ಟ್ ಟೈಗರ್‌ ಅಸ್ತಿತ್ವಕ್ಕೆ ಬಂತು. ನಂತರ ಇದು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರವಾಗಿ ಬದಲಾಗಿ ಹುಲಿಗಳ ಉಳಿವಿಗಾಗಿ ಕೆಲಸ ಮಾಡುತ್ತಿದೆ. ಸ್ಪೆಷಲ್‌ ಟೈಗರ್‌ ಪ್ರೊಟೆಕ್ಷನ್‌ ಫೋರ್ಸ್‌ ದೇಶದಲ್ಲೇ ಮೊದಲ ಬಾರಿಗೆ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಜಾರಿಗೆ ತರಲಾಗಿದೆ.